ರಾಯರು ಬಂದರು ಮಾವನ ಮನೆಗೆ

ಸಾಹಿತ್ಯ : ಕೆ.ಎಸ್. ನರಸಿಂಹಸ್ವಾಮಿ
ಸಂಗೀತ : ಸಿ. ಅಶ್ವಥ್
ಗಾಯನ : ರತ್ನಮಾಲಾ ಪ್ರಕಾಶ್
ಹಾಗಿಗಾಗಿ ಇಲ್ಲಿ ಕ್ಲಿಕ್ಕಿಸಿ
ರಾಯರು ಬಂದರು ಮಾವನ ಮನೆಗೆ ರಾತ್ರಿಯಾಗಿತ್ತು
ಹುಣ್ಣಿಮೆ ಹರಸಿದ ಬಾನಿನ ನಡುವೆ ಚಂದಿದ್ರ ಬಂದಿತ್ತು
ತುಂಬಿದ ಚಂದಿರ ಬಂದಿತ್ತು

ಮಾವನ ಮನೆಯಲಿ ಮಲ್ಲಿಗೆ ಹೂಗಳ ಪರಿಮಳ ತುಂಬಿತ್ತು
ಬಾಗಿಲ ಬಳಿ ಕಾಲಿಗೆ ಬಿಸಿನೀರಿನ ತಂಬಿಗೆ ಬಂದಿತ್ತು ಒಳಗಡೆ ದೀಪದ ಬೆಳಕಿತ್ತು

ಘಮಘಮಿಸುವ ಮೃಷ್ಟಾನ್ನದ ಭೋಜನ ರಾಯರ ಕಾದಿತ್ತು
ಬೆಳ್ಳಿಯ ಬಟ್ಟಲ ಗಸಗಸೆಪಾಯಸ ರಾಯರ ಕರೆದಿತ್ತು ಭೂಮಿಗೆ ಸ್ವರ್ಗವೆ ಇಳಿದಿತ್ತು

ಚಪ್ಪರಗಾಲಿನ ಮಂಚದ ಮೇಗಡೆ ಮೆತ್ತನ ಹಾಸಿತ್ತು
ಅಪ್ಪಟ ರೇಶಿಮೆ ದಿಂಬಿನ ಅಂಚಿಗೆ ಚಿತ್ರದ ಹೂವಿತ್ತು ಪದುಮಳು ಹಾಕಿದ ಹೂವಿತ್ತು

ಚಿಗುರೆಲೆ ಬಣ್ಣದ ಅಡಿಕೆಯ ತಂದಳು ನಾದಿನಿ ನಗುನಗುತಾ
ಬಿಸಿಬಿಸಿ ಹಾಲಿನ ಬಟ್ಟಲು ತಂದರು ಅಕ್ಕರೆಯಲಿ ಮಾವ ಮಡದಿಯ ಸದ್ದೇ ಇರಲಿಲ್ಲ

ಮಡದಿಯ ತಂಗಿಯ ಕರೆದಿಂತೆಂದರು ಅಕ್ಕನ ಕರೆಯಮ್ಮಾ
ಮೆಲುದನಿಯಲಿ ನಾದಿನ ಇಂತೆಂದಳು ಪದುಮಳು ಒಳಗಿಲ್ಲ ಪದುಮಳ ಬಳೆಗಳ ದನಿಯಿಲ್ಲ

ಬೆಳಗಾಯಿತು ಸರಿ ಹೊರಡುವೆನೆಂದರು ರಾಯರು ಮುನಿಸಿನಲಿ
ಒಳಮನೆಯಲಿ ನೀರಾಯಿತು ಎಂದಳು ನಾದಿನಿ ರಾಗಲಿ ಯಾರಿಗೆ ಎನ್ನಲು ಹರುಷದಲಿ

ಪದುಮಳು ಬಂದಳು..ಪದುಮಳು ಬಂದಳು..
ಪದುಮಳು ಬಂದಳು ಹೂವನು ಮುಡಿಯುತ ರಾಯರ ಕೋಣೆಯಲಿ…..
ರಾಯರ ಕೋಣೆಯಲಿ……ರಾಯರ ಕೋಣೆಯಲಿ……

ಸಾಲುಗಳು ತಪ್ಪಿಹೋಗಿವೆ

ಈ ಸಾಲುಗಳಲ್ಲಿ ಕೆಲವು ಸಾಲುಗಳು ತಪ್ಪಿಹೋಗಿವೆ –

ಮಡದಿಯ ತಂಗಿಯ ಕರೆದಿಂತೆಂದರು ಅಕ್ಕನ ಕರೆಯಮ್ಮಾ
ಮೆಲುದನಿಯಲಿ ನಾದಿನ ಇಂತೆಂದಳು ಪದುಮಳು ಒಳಗಿಲ್ಲ ಪದುಮಳ ಬಳೆಗಳ ದನಿಯಿಲ್ಲ

ಅವು ಹೀಗಿರಬೇಕು
ಮಡದಿಯ ತಂಗಿಯ ಕರೆದಿಂತೆಂದರು ಅಕ್ಕನ ಕರೆಯಮ್ಮಾ
ಮೆಲುದನಿಯಲಿ ನಾದಿನಿ ಇಂತೆಂದಳು ಪದುಮಳು ಒಳಗಿಲ್ಲ, ನಕ್ಕರು ರಾಯರು ನಗಲಿಲ್ಲ

ಏರುತ ಇಳಿಯುತ ಬಂದರು ರಾಯರು ದೂದ ಊರಿಂದ
ಕಣ್ಣನು ಕಡಿದರು ನಿದ್ದೆಯು ಬಾರದು ಪದುಮಳು ಒಳಗಿಲ್ಲ, ಪದುಮಳ ಬಳೆಗಳ ದನಿಯಿಲ್ಲ

ಸಂಗ್ರಹ- Kumar Rao

ನಿಮ್ಮ ಅನಿಸಿಕೆ